ಸು.ರಂ.ಎಕ್ಕುಂಡಿ

From Wikipedia

ಸು.ರಂ. ಎಕ್ಕುಂಡಿ - ಕನ್ನಡದ ಖ್ಯಾತ ಕವಿ ಮತ್ತು ಸಾಹಿತಿ.

ಇವರ ಪೂರ್ಣ ಹೆಸರು ಸುಬ್ಬಣ್ಣ ರಂಗಣ್ಣ ಎಕ್ಕುಂಡಿ. ಇವರು ಹುಟ್ಟಿದ್ದು ೧೯೨೩ ಜನವರಿ ೨೦ರಂದು, ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ. ೧೯೪೪ರಲ್ಲಿ ಬಿ.ಎ.(ಆನರ್ಸ್) ಪದವಿ ಪಡೆದ ಎಕ್ಕುಂಡಿಯವರು ಉತ್ತರ ಕನ್ನಡ ಜಿಲ್ಲೆಯ ಬಂಕಿಕೊಡ್ಲದಲ್ಲಿ ಪ್ರೌಢಶಾಲೆಯ ಅಧ್ಯಾಪಕರಾದರು. ೩೫ ವರ್ಷಗಳ ಸೇವೆಯ ನಂತರ ಅಲ್ಲಿಯೆ ಮುಖ್ಯಾಧ್ಯಾಪಕರಾದರು.

ಪರಿವಿಡಿ

[ಬದಲಾಯಿಸಿ] ಕೃತಿಗಳು

[ಬದಲಾಯಿಸಿ] ಕಾವ್ಯ

  • ಶ್ರೀ ಆನಂದತೀರ್ಥರು
  • ಸಂತಾನ
  • ಹಾವಾಡಿಗರ ಹುಡುಗ
  • ಮತ್ಸ್ಯಗಂಧಿ
  • ಬೆಳ್ಳಕ್ಕಿಗಳು

[ಬದಲಾಯಿಸಿ] ಕಥಾಸಂಕಲನ

  • ನೆರಳು

[ಬದಲಾಯಿಸಿ] ಕಾದಂಬರಿ

  • ಪ್ರತಿಬಿಂಬಗಳು

[ಬದಲಾಯಿಸಿ] ಪರಿಚಯ

  • ಶ್ರೀ ಪು.ತಿ.ನರಸಿಂಹಾಚಾರ್ಯರು

[ಬದಲಾಯಿಸಿ] ಅನುವಾದ

  • ಎರಡು ರಶಿಯನ್ ಕಾದಂಬರಿಗಳು

[ಬದಲಾಯಿಸಿ] ಪುರಸ್ಕಾರ

"ಲೆನಿನ್ನರ ನೆನಪಿಗೆ" ಎನ್ನುವ ಕೃತಿಗೆ ೧೯೭೦ರಲ್ಲಿ ಸೋವಿಯತ್ ಲ್ಯಾಂಡಿನ ನೆಹರು ಪುರಸ್ಕಾರ ದೊರೆತಿದೆ.

"ಮತ್ಸ್ಯಗಂಧಿ" ಕವನ ಸಂಕಲನಕ್ಕೆ ೧೯೭೫ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ದೊರೆತಿದೆ.

"ಬೆಳ್ಳಕ್ಕಿಗಳು" ಹಸ್ತಪ್ರತಿಗೆ ೧೯೮೨ರಲ್ಲಿ ಮುದ್ದಣ ಸ್ಮಾರಕ ಕಾವ್ಯ ಬಹುಮಾನ ದೊರೆತಿದೆ.

"ಬಕುಲದ ಹೂವುಗಳು" ಎಂಬ ಕೃತಿಗೆ ೧೯೯೨ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.




ಇದೊಂದು ಚುಟುಕು ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.