ವಿಜಯಾ ದಬ್ಬೆ
From Wikipedia
ವಿಜಯಾ ದಬ್ಬೆ - ಕನ್ನಡದಪ್ರಮುಖ ಲೇಖಕಿಯಲ್ಲೊಬ್ಬರು. ವಿಜಯಾ ದಬ್ಬೆಯವರು ಹಾಸನ ಜಿಲ್ಲೆಯ ಬೇಲೂರಿನ ದಬ್ಬೆಯಲ್ಲಿ ೧೯೫೨ ಜೂನ್ ೩ ರಂದು ಜನಿಸಿದರು.
ಇವರು ೧೨ಕ್ಕೂ ಹೆಚ್ಚು ಕೃತಿಗಳನ್ನು ಹಾಗು ೬೦ಕ್ಕೂ ಹೆಚ್ಚು ಲೇಖನಗಳನ್ನು ಪ್ರಕಟಿಸಿದ್ದಾರೆ. ಇವರ ಮೊದಲ ಕೃತಿ ಇರುತ್ತವೆ ಕವನ ಸಂಕಲನಕ್ಕೆ ಉದಯೋನ್ಮುಖ ವರ್ಧಮಾನ ಪ್ರಶಸ್ತಿ ಲಭಿಸಿದೆ. ಇವರ ಇತಿಗೀತಕ ಕವನಸಂಕಲನಕ್ಕೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ೧೯೯೬ರ ಮಾತೋಶ್ರೀ ರತ್ನಮ್ಮ ಹೆಗ್ಗಡೆ ದತ್ತಿ ನಿಧಿಯ ತೃತೀಯ ಬಹುಮಾನ ಲಭಿಸಿದೆ.
ವಿಜಯಾ ದಬ್ಬೆಯವರು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿಯ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಅಧ್ಯಾಪಕಿಯಾಗಿದ್ದು, ಪುಸ್ತಕ ಪ್ರಕಟಣೆ ಸಾಹಿತ್ಯ ಪತ್ರಿಕೆಯ ಸಂಪಾದಕಿ ಸಹ ಆಗಿದ್ದಾರೆ.
ಇವರ ಕೆಲವು ಕೃತಿಗಳು:
- ಇತಿಗೀತಕ
- ಕನ್ನಡ ಸಾಹಿತ್ಯದಲ್ಲಿ ಸ್ತ್ರೀಸಂವೇದನೆಯ ಸ್ವರೂಪ