ಗದಗ್

From Wikipedia

ಗದಗ್ ಉತ್ತರ ಕರ್ನಾಟಕದ ಒಂದು ಜಿಲ್ಲೆ. ಗದಗ್ ಪಟ್ಟಣ ಈ ಜಿಲ್ಲೆಯ ಕೇಂದ್ರ. ಕೆಲವು ವರ್ಷಗಳ ಹಿಂದಿನವರೆಗೂ ಗದಗ್, ಧಾರವಾಡ ಜಿಲ್ಲೆಯ ಭಾಗವಾಗಿದ್ದಿತು. ಈ ಜಿಲ್ಲೆಯ ಜನಸಂಖ್ಯೆ ಸುಮಾರು ೧೦ ಲಕ್ಷ. ಗದಗ್ ಜಿಲ್ಲೆಯವರಾದ ಇಬ್ಬರು ಪ್ರಸಿದ್ಧ ವ್ಯಕ್ತಿಗಳೆಂದರೆ ಕನ್ನಡದ ಮಹಾಕವಿ ಕುಮಾರವ್ಯಾಸ ಮತ್ತು ಪ್ರಸಿದ್ಧ ಗಾಯಕರಾದ ಗಾನಯೋಗಿ ಪಂಚಾಕ್ಷರಿ ಗವಾಯಿ.

ಗದಗ್ ಜಿಲ್ಲೆಯಲ್ಲಿ ಹರಿಯುವ ಎರಡು ಮುಖ್ಯ ನದಿಗಳೆಂದರೆ ಮಲಪ್ರಭಾ ಮತ್ತು ತುಂಗಭದ್ರಾ. ಇಲ್ಲಿ ಬೆಳೆಯಲ್ಪಡುವ ಮುಖ್ಯ ಬೆಳೆಗಳು ರಾಗಿ, ಬೇಳೆಗಳು, ನೆಲಗಡಲೆ, ಸೂರ್ಯಕಾಂತಿ, ಹತ್ತಿ, ಈರುಳ್ಳಿ ಮತ್ತು ಮೆಣಸಿನಕಾಯಿ.

ಧಾರ್ಮಿಕ ಪ್ರಾಮುಖ್ಯತೆಯುಳ್ಳ ಇಲ್ಲಿನ ಎರಡು ಮುಖ್ಯ ದೇವಸ್ಥಾನಗಳೆ೦ದರೆ ತ್ರಿಕೂಟೇಶ್ವರ ದೇವಾಲಯ ಮತ್ತು ವೀರ ನಾರಾಯಣನ ದೇವಸ್ಥಾನ. ಗದಗ್ ಪಟ್ಟಣದಲ್ಲಿ ಎರಡು ಮುಖ್ಯ ಜೈನ ದೇವಾಲಯಗಳು ಸಹ ಇದ್ದು ಪಾರ್ಶ್ವನಾಥ ತೀರ್ಥಂಕರ ಮತ್ತು ಮಹಾವೀರನಿಗೆ ಅರ್ಪಿತವಾಗಿವೆ.

ಗದಗ್ ಪಟ್ಟಣ ಬೆಂಗಳೂರಿನಿಂದ ೪೭೯ ಕಿಮೀ ದೂರದಲ್ಲಿದ್ದು ಧಾರವಾಡದಿಂದ ೮೦ ಕಿಮೀ ದೂರದಲ್ಲಿದೆ.

ಗದಗ ಜಿಲ್ಲೆಯಲ್ಲಿರುವ ತಾಲೂಕುಗಳು: ಗದಗ ಶಿರಹಟ್ಟಿ ಮುಂಡರಗಿ ರೋಣ ನರಗುಂದ

[ಬದಲಾಯಿಸಿ] ಇವನ್ನೂ ನೋಡಿ

ಧಾರವಾಡ

ಸೂಡಿ

[ಬದಲಾಯಿಸಿ] ಬಾಹ್ಯ ಸಂಪರ್ಕಗಳು

ಗದಗ್ ಜಿಲ್ಲೆಯ ನಕ್ಷೆ


ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ