ಜವಾಹರಲಾಲ್ ನೆಹರು

From Wikipedia

ಜವಾಹರಲಾಲ್ ನೆಹರು
ಜವಾಹರಲಾಲ್ ನೆಹರು
ಜನನ: ನವೆಂಬರ್ ೧೪, ೧೮೮೯
ಮರಣ: ಮೇ ೨೭, ೧೯೬೪
ಹುಟ್ಟಿದೂರು: ಅಲಹಾಬಾದ್, ಉತ್ತರ ಪ್ರದೇಶ
ಭಾರತದ ಪ್ರಧಾನ ಮಂತ್ರಿ
ಅಧಿಕಾರ ಅವಧಿ: ಮೊಟ್ಟ ಮೊದಲ ಪ್ರಧಾನ ಮಂತ್ರಿ
ರಾಜಕೀಯ ಪಕ್ಷ: ಭಾರತ ರಾಷ್ಟ್ರೀಯ ಕಾಂಗ್ರೆಸ್
ಅಧಿಕಾರ ವಹಿಸಿಕೊಂಡಿದ್ದು: ಆಗಸ್ಟ್ ೧೫, ೧೯೪೭
ಅಧಿಕಾರ ಬಿಟ್ಟುಕೊಟ್ಟಿದ್ದು: ಮೇ ೨೭, ೧೯೬೪
ಇವರ ಉತ್ತರಾಧಿಕಾರಿ: ಗುಲ್ಜಾರಿಲಾಲ್ ನಂದ

ಜವಾಹರಲಾಲ್ ನೆಹರು (ನವೆಂಬರ್ ೧೪, ೧೮೮೯ - ಮೇ ೨೭, ೧೯೬೪) - ಭಾರತದ ಮೊದಲ ಪ್ರಧಾನ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರು. ಆಗಸ್ಟ್ ೧೫, ೧೯೪೭ ರಿಂದ ಪ್ರಾರಂಭಿಸಿ ಇವರು ಮರಣಕಾಲದವರೆಗೂ ಭಾರತದ ಪ್ರಧಾನಿಯಾಗಿದ್ದರು.

[ಬದಲಾಯಿಸಿ] ನೆಹರು ಜೀವನದ ಬಗೆಗಿನ ಮಾಹಿತಿ

೧೮೮೯-೧೯೧೮

ಪ್ರಮುಖ ಕಾಂಗ್ರೆಸ್ ನಾಯಕರಾದ ಮೋತಿಲಾಲ್ ನೆಹರು ಅವರ ಮಗ, ನೆಹರೂ ಇಂಗ್ಲೆಂಡ್‌ನ ಹ್ಯಾರ್ರೊ ಸ್ಕೂಲ್ ಹಾಗು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಿಂದ ಓದು ಮುಗಿಸಿ, ತಂದೆಯೊಂದಿಗೆ ರಾಜಕೀಯದಲ್ಲಿ ಸಕ್ರಿಯರಾದರು. ಇಂಗ್ಲೆಂಡ್‌ನಲ್ಲಿದ್ದಾಗ ನೆಹರು ಅವರು ಫೇಬಿಯನ್ ಸಾಮಾಜಿಕ ವಿಧಾನಗಳನ್ನು ಬಹುವಾಗಿ ಮೆಚ್ಚಿದ್ದರು. ೧೯೧೬ರ ವಸಂತ ಪಂಚಮಿಯ ದಿನದಂದು ನೆಹರು ಅವರು ಕಮಲಾ ಕೌಲ್‌ರವರನ್ನು ಮದುವೆಯಾದರು.

೧೯೧೮-೧೯೩೭

೧೯೧೯ ರಲ್ಲಿ ಮಗಳು ಇಂದಿರಾ ಪ್ರಿಯದರ್ಶಿನಿ ಜನಿಸಿದಳು. ರಾಜಕೀಯದಲ್ಲಿ, ಮಹಾತ್ಮ ಗಾಂಧಿಯವರ ಶಿಷ್ಯನಾದ ಇವರು, ಮೊದಲ ಬಾರಿಗೆ ೧೯೨೯ ರಲ್ಲಿ ಭಾರತ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಮೇಲೇರಿದರು. ಈ ದಿನಗಳನ್ನು ಇವರು ಬಹುವಾಗಿ ಕಾರಾವಸದಲ್ಲಿ ಪುಸ್ತಕಗಳು, ಪತ್ರಗಳನ್ನು ಬರೆಯುತ್ತಾ ಕಳೆದರು.

೧೯೩೭-೧೯೪೭

'ಭಾರತ ಬಿಟ್ಟು ತೊಲಗಿ' (Quit India Movement) ಪರ್ಯಾಯ ೧೯೪೨ರಲ್ಲಿ ೩೨ ತಿಂಗಳಿಗೆ ಕಾರಾಗೃಹವಾಸ ಅನುಭವಿಸಿದ ಇವರು, ಭಾರತದ ಮೊದಲ ಸರಕಾರವನ್ನು ೧೯೪೬ರಲ್ಲಿ ರಚಿಸಿದರು.

೧೯೪೭-೧೯೬೪

ಗಾಂಧಿಯೊಂದಿಗೆ ನೆಹರು
ಗಾಂಧಿಯೊಂದಿಗೆ ನೆಹರು

ನೆಹರೂರವರು ೧೮ ವರ್ಷಗಳ ಕಾಲ ಭಾರತದ ಪ್ರಧಾನಿಯಾಗದ್ದರು. ಇವರು ೧೯೬೪ಮೇ ೨೭ರಂದು ನಿಧನರಾದರು. ಪಂಡಿತ ಜವಹರಲಾಲ್ ನೆಹರೂರವರು ಆಗಸ್ಟ್ ೧೪ ರ ರಾತ್ರಿ ಸಂಸತ್ತನ್ನುದ್ದೇಶಿಸಿ ಮಾಡಿದ ಎ ಟ್ರಿಸ್ಟ್ ವಿಥ್ ಡೆಸ್ಟಿನಿ ಭಾಷಣದ ಕನ್ನದ ಅನುವಾದ.

"ಹಿಂದೊಮ್ಮೆ ನಾವು ವಿಧಿಗೊಂದು ಮಾತಿತ್ತಿದ್ದೆವು. ಅ ಭಾಷೆಯನ್ನು ಕೇವಲ ಸಂಪೂರ್ಣವಾಗಿಯಲ್ಲದೇ ಮಹತ್ತರವಾಗಿ ಕಾರ್ಯಗತಗೊಳಿಸುವ ಸಮಯವಿಂದೊದಗಿದೆ. ಈ ನಡುರಾತ್ರಿಯ ವಿಶೇಷ ಘಳಿಗೆಯಲ್ಲಿ, ಇಡೀ ವಿಶ್ವ ನಿದ್ರಿಸುತ್ತಿರುವಾಗ, ಭಾರತ ಸ್ವಾತಂತ್ರ್ಯವನ್ನು ಮೈದಳೆದು ಮೇಲೇಳಲಿದೆ. ಹಳೆತೆಲ್ಲವನ್ನೊದರಿ ಹೊಸತನಕ್ಕೆ ಕಾಲಿಡುವ ಮತ್ತು ಶತಮಾನಗಳಿಂದ ಶೋಷಿಸಲ್ಪಟ್ಟ ನಾಡಿನಾತ್ಮ ಧ್ವನಿದಳೆವ ಈ ಘಳಿಗೆ, ಇತಿಹಾಸದ ಅಪರೂಪದ ಮುಹೂರ್ತಗಳಲ್ಲೊಂದು. ಈ ಶುದ್ಧ ಸಮಯದಲ್ಲಿ ಭಾರತದ ಮತ್ತು ಭಾರತಾಂಬೆಯ ಸತ್ಪ್ರಜೆಗಳ ಸೇವೆಗಾಗಿ, ಹೆಚ್ಚೇನು ವಿಶ್ವದೊಳಿತಿಗಾಗಿ ನಮ್ಮದೆಲ್ಲವನ್ನು ಮುಡಿಪಿಡುವುದಾಗಿ ಮಾಡುವ ಪ್ರತಿಜ್ಞೆ ಅತೀ ಸಮರ್ಪಕವೆನಿಸುತ್ತದೆ."



[ಬದಲಾಯಿಸಿ] ಭಾರತದ ಪ್ರಧಾನಮಂತ್ರಿಗಳು

ಜವಾಹರಲಾಲ್ ನೆಹರು | ಗುಲ್ಜಾರಿ ಲಾಲ್ ನಂದಾ | ಲಾಲ್ ಬಹಾದುರ್ ಶಾಸ್ತ್ರಿ | ಇಂದಿರಾ ಗಾಂಧಿ | ಮೊರಾರ್ಜಿ ದೇಸಾಯಿ | ಚೌಧುರಿ ಚರಣ್ ಸಿಂಗ್ | ರಾಜೀವ್ ಗಾಂಧಿ | ವಿ.ಪಿ.ಸಿಂಗ್ | ಚಂದ್ರಶೇಖರ್ | ಪಿ.ವಿ.ನರಸಿಂಹರಾವ್ | ಅಟಲ್ ಬಿಹಾರಿ ವಾಜಪೇಯಿ | ಹೆಚ್.ಡಿ.ದೇವೇಗೌಡ | ಇಂದ್ರಕುಮಾರ್ ಗುಜ್ರಾಲ್ | ಡಾ.ಮನಮೋಹನ್ ಸಿಂಗ್

[ಬದಲಾಯಿಸಿ] ಸ್ವಾತಂತ್ರ್ಯ ಹೋರಾಟಗಾರರು

ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್ ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ | ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್ ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ | ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ | ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು | ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್ | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ | ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ | ಸಂಗೊಳ್ಳಿ ರಾಯಣ್ಣ


          ಭಾರತದ ಸ್ವಾತಂತ್ರ್ಯ               
ಚರಿತ್ರೆ: ವಸಾಹತುಶಾಹಿ - ಈಸ್ಟ್ ಇಂಡಿಯಾ ಕಂಪನಿ - ಪ್ಲಾಸೀ ಕದನ - ಬಕ್ಸರ್ ಕದನ
ತತ್ವಗಳು: ರಾಷ್ಟ್ರೀಯತೆ - ಸ್ವರಾಜ್ - ಗಾಂಧಿವಾದ - ಸತ್ಯಾಗ್ರಹ - ಹಿಂದೂ ರಾಷ್ಟ್ರೀಯತೆ - ಸ್ವದೇಶಿ - ಸಮಾಜವಾದ
ಘಟನೆ-ಚಳುವಳಿಗಳು: ೧೮೫೭ರ ದಂಗೆ - ಬಂಗಾಳದ ವಿಭಜನೆ - ಕ್ರಾಂತಿಕಾರಿಗಳು - ಚಂಪಾರಣ ಮತ್ತು ಖೇಡಾ - ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡ - ಅಸಹಕಾರ - ಸೈಮನ್ ಆಯೋಗ - ನೆಹರು ವರದಿ - ಉಪ್ಪಿನ ಸತ್ಯಾಗ್ರಹ - ೧೯೩೫ರ ಭಾರತ ಸರ್ಕಾರ ಕಾಯ್ದೆ - ಕ್ರಿಪ್ ಆಯೋಗ - ಭಾರತ ಬಿಟ್ಟು ತೊಲಗಿ - ಮುಂಬೈ ದಂಗೆ
ಸಂಘಟನೆಗಳು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ - ಗದರ್ - ಹೋಂ ರೂಲ್ ಚಳುವಳಿ - ಭಾರತೀಯ ರಾಷ್ಟ್ರೀಯ ಸೇನೆ - ಆಜಾದ್ ಹಿಂದ್ - ಅನುಶೀಲನ ಸಮಿತಿ
ನಾಯಕರು: ಮಂಗಲ ಪಾಂಡೆ - ಝಾನ್ಸಿ ರಾಣಿ - ಬಾಲ ಗಂಗಾಧರ ತಿಲಕ್ - ಗೋಪಾಲ ಕೃಷ್ಣ ಗೋಖಲೆ - ಮಹಾತ್ಮಾ ಗಾಂಧಿ - ಸರ್ದಾರ್ ಪಟೇಲ್ - ಸುಭಾಷ್ ಚಂದ್ರ ಬೋಸ್ - ಜವಾಹರಲಾಲ್ ನೆಹರು - ಮೌಲಾನಾ ಆಜಾದ್ - ಚಂದ್ರಶೇಖರ್ ಆಜಾದ್ - ರಾಜಾಜಿ - ಭಗತ್ ಸಿಂಗ್
ಬ್ರಿಟಿಷ್ ಆಡಳಿತ: ರಾಬರ್ಟ್ ಕ್ಲೈವ್ - ಲೂಯಿ ಮೌಂಟ್‌ಬ್ಯಾಟನ್
ಸ್ವಾತಂತ್ರ್ಯ: ಕ್ಯಾಬಿನೆಟ್ ಆಯೋಗ - ಭಾರತದ ಸ್ವಾತಂತ್ರ್ಯ ಕಾಯ್ದೆ - ಭಾರತದ ವಿಭಜನೆ - ಭಾರತದ ರಾಜಕೀಯ ಒಗ್ಗೂಡುವಿಕೆ - ಭಾರತದ ಸಂವಿಧಾನ